Kannada NewsKarnataka News

ಡಿಕೆಶಿ ನೇಮಕ: ಬೆಳಗಾವಿ ಜಿಲ್ಲೆಯ ಹಲವೆಡೆ ಸಂಭ್ರಮ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ ನೇಮಕವಾಗುತ್ತಿದ್ದಂತೆ ಬೆಳಗಾವಿ ಜಿಲ್ಲೆಯ ಅವರ ಅಭಿಮಾನಿಗಳು ಸಂಭ್ರಮ ಆಚರಿಸಿದರು.

ಗ್ರಾಮೀಣ ಕ್ಷೇತ್ರದ ಶಾಸಕಿ, ಕೆಪಿಸಿಸಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳಕರ್, ಡಿ.ಕೆ.ಶಿವಕುಮಾರ ಆಯ್ಕೆ ಅತ್ಯಂತ ಸೂಕ್ತವಾಗಿದೆ ಎಂದು ಸ್ವಾಗತಿಸಿದ್ದಾರೆ.
ಟ್ರಬಲ್ ಶೂಟರ್ ಎಂದೇ ಖ್ಯಾತರಾಗಿರುವ ಶಿವಕುಮಾರ ನೇಮಕದಿಂದ ಕಾಂಗ್ರೆಸ್ ಪಕ್ಷ ಪ್ರಬಲವಾಗು ಮುನ್ನಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದು, ಪಕ್ಷದ ಹೈಕಮಾಂಡ್ ಯೋಗ್ಯ ಆಯ್ಕೆ ಮಾಡಿದೆ ಎಂದಿದ್ದಾರೆ.
ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಅಧ್ಯಕ್ಷ ಮಹಾಂತೇಶ ಮತ್ತಿಕೊಪ್ಪ ನೇತೃತ್ವದಲ್ಲಿ   ಬೈಲಹೊಂಗಲ ಪಟ್ಟಣದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಾಚಿಸಿದರು.
ಕಾಂಗ್ರೆಸ್ ಮುಖಂಡ ವೀರಣ್ಣ ಜವಳಿ, ಈರಣ್ಣ ಬೆಟಗೇರಿ, ಚೇತನ ಮುದಕನಗೌಡರ , ಪ್ರಕಾಶ ಸೊಗಲದ, ಮಹೇಶ ನಾವಲಗಟ್ಟಿ ಮುಂತಾದವರು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button