
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬುಧವಾರ ಸಂಜೆ ಬೆಳಗಾವಿಗೆ ಆಗಮಿಸಿದರು.

ಬೆಳಗಾವಿ ಹೊರವಲಯದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳಿಂದ ಭರ್ಜರಿ ಸ್ವಾಗತ ಕೋರಲಾಯಿತು.
ನಂತರ ಬೆಳಗಾವಿಯ ಕಾಂಗ್ರೆಸ್ ಭವನದ ಬಳಿ ಕ್ಯಾಂಟೀನ್ ನಲ್ಲಿ ಬಜ್ಜಿ, ಮಿರ್ಚಿ ಸವಿದ ಡಿ.ಕೆ. ಶಿವಕುಮಾರ್ ತಾವೇ ಸ್ವತಃ ಬಿಲ್ ನೀಡಿದರು.
