Latest

ಡಿ.ಕೆ.ಶಿವಕುಮಾರ ಧರ್ಮಸ್ಥಳ ಭೇಟಿ

ಪ್ರಗತಿವಾಹಿನಿ ಸುದ್ದಿ, ಉಜಿರೆ:  ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಮಾಡಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಅವರನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ತಂಗಿದ ಅವರು ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಬಸದಿಯಲ್ಲಿ ಪಂಚಕಲ್ಯಾಣ, ಪ್ರತಿಷ್ಠಾ ಮಹೋತ್ಸವ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಅಳದಂಗಡಿಯಲ್ಲಿರುವ ಬೆಟ್ಟದ ಬಸದಿಯಲ್ಲಿ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿಯ ಪಂಚಕಲ್ಯಾಣ ಮತ್ತು ಬ್ರಹ್ಮಯಕ್ಷ ಹಾಗೂ ಮಹಾಮಾತೆ ಪದ್ಮಾವತಿ ಅಮ್ಮನವರ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ. ೧೩ ರಿಂದ ೧೭ರ ವರೆಗೆ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆಯಲಿದೆ.

ತೀರ್ಥಂಕರರ ಜೀವನದ ವಿವಿಧ ಹಂತಗಳಾದ ಗರ್ಭಾವತರಣ (ಗರ್ಭ ಕಲ್ಯಾಣ) ಜನನ (ಜನ್ಮ ಕಲ್ಯಾಣ), ದೀಕಾ ಕಲ್ಯಾಣ ಕೇವಲಜ್ಞಾನ ಪ್ರಾಪ್ತಿ (ಕೇವಲಜ್ಞಾನ ಕಲ್ಯಾಣ) ಮತ್ತು ಮೋಕ್ಷ ಪ್ರಾಪ್ತಿ (ಮೋಕ್ಷ ಕಲ್ಯಾಣ) ಯನ್ನು ಪಂಚಕಲ್ಯಾಣವಾಗಿ ನಡೆಸುವುದು ಸಂಪ್ರದಾಯವಾಗಿದೆ.
ಕಾರ್ಕಳದ ಪೂಜ್ಯ ಲಲಿತಕೀರ್ತಿ ಭಟ್ಟಾರಕರು, ಮೂಡಬಿದ್ರೆಯ ಚಾರುಕೀರ್ತಿ ಭಟ್ಟಾರಕರು ಮತ್ತು ಕಂಬದಹಳ್ಳಿ ಜೈನ ಮಠದ ಭಾನುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಪಂಚಕಲ್ಯಾಣ ನಡೆಯಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಅಳದಂಗಡಿ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರು, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮತ್ತು ಎಂ.ಎನ್. ರಾಜೇಂದ್ರ ಕುಮಾರ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸುವರು. ವಿವಿಧ ಸಮಿತಿಗಳನ್ನು ರಚಿಸಿದ್ದು, ಭರದಿಂದ ಸಿದ್ಧತೆಗಳು ನಡೆಯುತ್ತಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button