Latest

ಡಿ.ಕೆ.ಶಿವಕುಮಾರ ವಿರುದ್ಧ ಆರ್.ಅಶೋಕ, ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಬಾರಿಯ ಬಿಜೆಪಿ ಟಿಕೆಟ್ ನಲ್ಲಿ ಇದೂ ಅಚ್ಛರಿ. ವಿ.ಸೋಮಣ್ಣ ಮತ್ತು ಆರ್.ಅಶೋಕ ಎರಡೆರಡು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಆರ್.ಅಶೋಕ ಪದ್ಮನಾಭನಗರದ ಜೊತೆಗೆ ಕನಕಪುರದಲ್ಲಿ ಡಿ.ಕೆ.ಶಿವಕುಮಾರ ವಿರುದ್ಧ ಸ್ಪರ್ಧಿಸಲಿದ್ದಾರೆ. ವಿ.ಸೋಮಣ್ಣ ಚಾಮರಾಜ ನಗರದ ಜೊತೆಗೆ ಸಿದ್ದರಾಮಯ್ಯ ವಿರುದ್ಧ ವರುಣಾದಿಂದಲೂ ಕಣಕ್ಕಿಳಿಯಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಬಿಜೆಪಿ ಇಬ್ಬರು ಸಚಿವರಿಗೆ ಎರಡು ಕ್ಷೇತ್ರಗಳ ಟಿಕೆಟ್ ನೀಡಿದೆ.

ಸಚಿವರಾದ ಆರ್.ಅಶೋಕ್ ಹಾಗೂ ವಿ.ಸೋಮಣ್ಣ ಅವರಿಗೆ ಎರಡು ಕ್ಷೇತ್ರಗಳ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಅವರನ್ನು ಕನಕಪುರದಲ್ಲಿ ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ ಸಚಿವ ಆರ್,ಅಶೋಕ್ ಅವರನ್ನು ಕನಕಪುರ ಹಾಗೂ ಪದ್ಮನಾಭನಗರ ಎರಡೂ ಕ್ಷೇತ್ರಗಳಿಂದ ಅಖಾಡಕ್ಕಿಳಿಸಿದೆ.

ಇನ್ನು ವರುಣಾದಲ್ಲಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಪ್ರಬಲ ಪೈಪೋಟಿ ನೀಡುವ ನಿಟ್ಟಿನಲ್ಲಿ ಸಚಿವ ವಿ.ಸೋಮಣ್ಣ ಅವರನ್ನು ಕಣಕ್ಕಿಳಿಸಿದ್ದು, ಸೋಮಣ್ಣ ಅವರಿಗೆ ವರುಣಾ ಹಾಗೂ ಚಾಮರಾಜನಗರ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ಘೋಷಣೆ ಮಾಡಲಾಗಿದೆ.

Home add -Advt
https://pragati.taskdun.com/vidhanasabha-electiinbjp-candidate-listrelease/

Related Articles

Back to top button