ಕೊರೊನಾ ಭೀತಿಗೆ ಆಸ್ಪತ್ರೆಯಿಂದಲೇ ಪರಾರಿಯಾದ ವೈದ್ಯರು

ಪ್ರಗತಿವಾಹಿನಿ ಸುದ್ದಿ; ಕಾರವಾರ: ರಾಜ್ಯಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರುಗಳೇ ಆತಂಕಕ್ಕೀಡಾಗಿ ಆಸ್ಪತ್ರೆಯಿಂದ ಪರಾರಿಯಾಗುತ್ತಿದ್ದಾರೆ. ಹೌದು. ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಇಬ್ಬರು ವೈದ್ಯರು ಕೊರೊನಾಗೆ ಹೆದರಿ ಆಸ್ಪತ್ರೆಯಿಂದ ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಪತಂಜಲಿ ಆಸ್ಪತ್ರೆಯಲ್ಲಿ ನಡೆದಿದೆ.

ಕಾರವಾರದ ನೌಕಾನೆಲೆಯಲ್ಲಿರುವ ಪತಂಜಲಿ ಆಸ್ಪತ್ರೆಗೆ ಕೊರೊನಾ ಸೋಂಕಿತ ಆರು ಜನ ರೋಗಿಗಳಿದ್ದು ಇವರಿಗೆ ಚಿಕಿತ್ಸೆ ನೀಡಲೆಂದು ತರಬೇತಿ ನೀಡಿ ಇಬ್ಬರು ವೈದ್ಯರನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಕಾರ್ ಪಾರ್ಕ್ ಮಾಡಿ ಬರುವುದಾಗಿ ಹೇಳಿ ಹೋದ ಈ ವೈದರು ಮೊಬೈಲ್ ಸ್ವಿಚ್ ಆಫ್ ಮಾಡಿ ಪತಂಜಲಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾರೆ.

ಕರ್ತವ್ಯ ಲೋಪ ಹಿನ್ನಲೆಯಲ್ಲಿ ಜಿಲ್ಲಾ ಪಂಚಾಯಿತಿ ಸಿ.ಇ.ಒ ಆರ್.ರೋಷನ್ ವೈದ್ಯರಿಗೆ ನೋಟಿಸ್ ನೀಡಿದ್ದು ಏಳು ದಿನದಲ್ಲಿ ಉತ್ತರ ನೀಡದಿದ್ದರೆ ಕರ್ತವ್ಯ ಲೋಪದಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button