
ಪ್ರಗತಿವಾಹಿನಿ ಸುದ್ದಿ : ಪ್ರಯಾಗರಾಜ್ ನ ಮಹಾಕುಂಭಕ್ಕೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಬಸ್ ಅಪಘಾತಕ್ಕೀಡಾಗಿ 8 ಮಂದಿ ಸಾವನ್ನಪ್ಪಿದ್ದು, 40 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಉತ್ತರ ಪ್ರದೇಶದ ಬದ್ಲಾಪುರದ ಚೌನ್ಪುರದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮಾಹಿತಿಯ ಪ್ರಕಾರ, ಭಕ್ತರು ತುಂಬಿದ್ದ ಡಬಲ್ ಡೆಕ್ಕರ್ ಬಸ್ ಗೆ ಹಿಂದಿನಿಂದ ಅಕ್ಕಿ ತುಂಬಿದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಈ ಅವಘಡದಲ್ಲಿ 8 ಮಂದಿ ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚೌನ್ಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ