Latest

*ನವವಿವಾಹಿತೆ ಟೆಕ್ಕಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯಲ್ಲಿ ನಡೆದಿದೆ.

Home add -Advt

22 ವರ್ಷದ ಪೂಜಾ ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವರ್ಷದ ಹಿಂದಷ್ಟೇ ಪೂಜಾಳನ್ನು ಸುನೀಲ್ ಎಂಬಾತನ ಜೊತೆ ವಿವಾಹಮಾಡಿ ಕೊಡಲಾಗಿತ್ತು. ಮದುವೆಯ ಬಳಿಕ ಸುನೀಲ್ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ.

ವರದಕ್ಷಿಣೆ ಕಿರುಕುಳಕ್ಕೆ ನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಮಗಳ ಸಾವಿಗೆ ಪತಿ ಸುನೀಲ್ ಹಾಗೂ ಮೈದುನ ಅನಿಲ್ ಕಾರಣ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ.

ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button