Kannada NewsKarnataka NewsLatest

*ವರದಕ್ಷಿಣೆ ಕಿರುಕುಳ; ಮಹಿಳೆ ಬಲಿ; ಮಗು ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಿದ್ಲಿಪುರ ಗ್ರಾಮದಲ್ಲಿ ನಡೆದಿದೆ.

25 ವರ್ಷದ ಕಸ್ತೂರಿ ಮೃತ ಮಹಿಳೆ. ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಮಹಿಳೆ ಕಸ್ತೂರಿ ಮನೆಯವರು ತಾಯಿ, ಮಗುವಿಗೆ ವಿಷ ಕುಡಿಸಿದ್ದಾರೆ ಎಂದು ಕಸ್ತೂರಿ ಪೋಷಕರು ಆರೋಪಿಸಿದ್ದಾರೆ.

ತೀವ್ರ ಅಸ್ವಸ್ಥಳಾಗಿದ್ದ ಮಹಿಳೆ ಹಾಗೂ ಮಗುವನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ. ಮಗು ಸ್ಥಿತಿ ಗಂಭೀರವಾಗಿದೆ.

Home add -Advt

Related Articles

Back to top button