Kannada NewsKarnataka NewsLatest

*MBBS ವಿದ್ಯಾರ್ಥಿ ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ: ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದೆ. ಕೋವಿಡ್ ಸಂದರ್ಭದಲ್ಲಿ ದೀರ್ಘಕಾಲದ ಅನಾರೋಗ್ಯವೇ ಇದಕ್ಕೆ ಕಾರಣವಿರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ. ಹಾಸನದಲ್ಲಿ ಇಂದು ಒಂದೇ ದಿನ ಮೂವರು ಹೃದಯಾಘಾತಕ್ಕೆ ಬಲಿಯಾಗಿರುವ ಬೆನ್ನಲ್ಲೇ ಇದೀಗ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

Home add -Advt

ವಿಜಯಪುರ ಮೂಲದ ಎಂಬಿಬಿಎಸ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 26 ವರ್ಷದ ವೈಭವ್ ಕುಲಕರ್ಣಿ ಮೃತ ವಿದ್ಯಾರ್ಥಿ.

ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕುಮಸಗಿ ಗ್ರಾಮದ ವೈಭವ್, ಬಾಗಲಕೋಟೆಯಲ್ಲಿ ಕೊನೆ ವರ್ಷದ ಎಂಬಿಬಿಎಸ್ ಓದುತ್ತಿದ್ದ. ಪ್ರವಾಸಕ್ಕೆಂದು ತಮಿಳುನಾಡಿಗೆ ಹೋಗಿದ್ದ. ವಾಪಸ್ ಆಗುವಾಗ ಉಸಿರಾಟದ ತೊಂದರೆಯಾಗಿದೆ. ಈ ಹಿನ್ನೆಲೆಯಲ್ಲಿ ವೈಭವ್ ಸ್ನೇಹಿತರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

Related Articles

Back to top button