Kannada NewsKarnataka NewsLatest
*ಒಂದು ವಾರ ವಿಧಾನಮಂಡಲ ವಿಶೇಷ ಅಧಿವೇಶನ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ*

ಪ್ರಗತಿವಾಹಿನಿ ಸುದ್ದಿ: ವಿಧಾನಮಂಡಲ ವಿಶೇಷ ಅಧಿವೇಶನ ನಡೆಸಲು ಮುಖ್ಯಮಂತ್ರಿ ಸಿದ್ದರಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್ ಈ ಬಗ್ಗೆ ತಿಳಿಸಿದ್ದಾರೆ. ಜನವರಿ 22 ರಿಂದ ಜ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆಯಲಾಗಿದೆ. ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಜ.22ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಅಷಣ ಅನುಮೋದಿಸಲು ಮುಖ್ಯಮಂತ್ರಿಗಳಿಗೆ ಪರಮಾಧಿಕಾರವಿದೆ ಎಂದರು.
ವಿಶೇಷ ಅಧಿವೇಶನದಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯ ಪರಿಣಾಮಗಳ ಬಗ್ಗೆ ಅಧಿವೇಶದಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.




