Kannada NewsKarnataka News

ಶಿವಮೊಗ್ಗ ಪಾಲಿಕೆ ಆಯುಕ್ತರಾಗಿ ಡಾ.ಕವಿತಾ ಯೋಗಪ್ಪನವರ್ ನೇಮಕ

ಪ್ರವತಿವಾಹಿನಿ ಸುದ್ದಿ: ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಡಾ. ಕವಿತಾ ಯೋಗಪ್ಪನವರ್ ಅವರನ್ನು ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ನೇಮಕ ಮಾಡಲಾಗಿದೆ.‌

ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಡಾ. ಕವಿತಾ ಯೋಗಪ್ಪನವರ್ ಈ ಹಿಂದೆ ವಿಶೇಷ ಭೂಸ್ವಾಧೀನಾಧಿಕಾರಿ, ಡಾ.  ಶಿವರಾಮ ಕಾರಂತ ಬಡಾವಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.‌

ಇವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಾಗಿ ವರ್ಗಾಯಿಸಿ ಆದೇಶಿಸಿದೆ.

ಈ ಆದೇಶದಿಂದ ಸ್ಥಳ ನಿರೀಕ್ಷಣೆಗೆ ಬರುವ ಅಧಿಕಾರಿಯು ಮುಂದಿನ ಸ್ಥಳ ನಿಯುಕ್ತಿಗಾಗಿ ತಮ್ಮ ಮಾತ್ರ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸೂಚಿಸಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button