Kannada NewsKarnataka NewsLatest

*ದೇಶವಿಭಜನೆ ಹೇಳಿಕೆ ಕೊಡುವವರಿಗೆ ಗುಂಡಿಕ್ಕಬೇಕು; ಈಶ್ವರಪ್ಪ ಹೇಳಿಕೆಗೆ ಗೃಹ ಸಚಿವರ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ದೇಶವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಟ್ಟು ಕೊಲ್ಲಬೇಕು ಎಂದಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಗೃಹ ಸಚಿವ ಡಾ.ಪರಮೇಶ್ವರ್, ಈಶ್ವರಪ್ಪಗೆ ಪ್ರತ್ಯೇಕ ಕಾನೂನು ಮಾಡಲು ಹೇಳಿ. ಈ ಕಾನೂನು ಮೀರಿ ಯಾರೂ ಕೂಡ ವರ್ತಿಸಬಾರದು. ಕಾನೂನು ಮೀರು ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಇನ್ನು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ ಐ ಆರ್ ವಿಚಾರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವರು, ಕೋಮು ಸೌಹಾರ್ದತೆ ಕದಡುವುದನ್ನು ನೋಡಿ ಸುಮ್ಮನೆ ಕೂರಲ್ಲ ಅಂತವರ ವಿರುದ್ಧ ನಮ್ಮ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದಿದ್ದಾರೆ.

ಇನ್ನು ಹುಕ್ಕಾ ಬಾರ್ ಗಳಲ್ಲಿ ಡ್ರಗ್ಸ್ ಸಪ್ಲೈ ಮಾಡಲಾಗುತ್ತಿದೆ ಎಂಬುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಇನ್ಮುಂದೆ ಹುಕ್ಕಾ ಬಾರ್ ಗಳನ್ನು ನಿಷೇಧಿಸಲಾಗುವುದು ಎಂದರು.

Related Articles

Back to top button