Belagavi NewsBelgaum NewsKannada NewsKarnataka NewsLatestPolitics

*ಡಾ.ಪ್ರಭಾಕರ ಕೋರೆಯವರಿಗೆ ಹೆಚ್. ಡಿ. ದೇವೇಗೌಡ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನ ಮಂತ್ರಿ, ರಾಜಕೀಯ ಮುತ್ಸದ್ದಿ ಹೆಚ್.ಡಿ.ದೇವೇಗೌಡರು ತಮ್ಮ ಬದುಕಿನ 93 ಸಾರ್ಥಕ ವರ್ಷಗಳನ್ನು ಪೂರೈಸಿ, ಅಭಿಮಾನಿಗಳಿಂದ “ಗಂಗ ಸಾಮ್ರಾಟ ಶ್ರೀಪುರುಷ” ಪ್ರಶಸ್ತಿಗೆ ಭಾಜನರಾದ ನಿಮಿತ್ತ ,ವಿವಿಧ ರಂಗಗಳಲ್ಲಿ ಸಾಧನೆಗೈದಿರುವ 93 ಕೀರ್ತಿಸಂಪನ್ನರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿತ್ತು.

Home add -Advt

ಬೆಂಗಳೂರಿನ ಡಾ.ಬಾಬು ಜಗಜೀವನ್‌ರಾಮ್ ಭವನದಲ್ಲಿ ಜೂನ್ 22 ರಂದು ಈ ಸಮಾರಂಭ ಅದ್ಧೂರಿಯಾಗಿ ಜರುಗಿದ್ದು, ಹೆಚ್.ಡಿ.ದೇವೇಗೌಡ ಅಭಿನಂದನಾ ಸಮಿತಿಯು ಡಾ.ಪ್ರಭಾಕರ ಕೋರೆಯವರಿಗೆ ‘ಶ್ರೀ ಹೆಚ್.ಡಿ.ದೇವೇಗೌಡ ಪ್ರಶಸ್ತಿ’ಯನ್ನು ಪ್ರದಾನ ಮಾಡಿದೆ.


ಡಾ.ಪ್ರಭಾಕರ ಕೋರೆಯವರು ಶಿಕ್ಷಣ, ಕೃಷಿ, ಸಹಕಾರ, ರಾಜಕೀಯ, ಸಮುದಾಯದ ಕ್ಷೇಮಾಭಿವೃದ್ಧಿ ಕ್ಷೇತ್ರದಲ್ಲಿನ ‘ನ ಭೂತೋ ನ ಭವಿಷ್ಯತಿ’ ಎಂಬ ಮಟ್ಟದಲ್ಲಿ ಅಗಾಧವಾದ ಸೇವೆಯನ್ನು ಸಲ್ಲಿಸುತ್ತಾ, ಕರ್ನಾಟಕ ರಾಜ್ಯ ಬಹುದೊಡ್ಡ ಆಸ್ತಿಯಾಗಿ ದೇಶ ವಿದೇಶಗಳಲ್ಲೂ ಜನಮನ್ನಣೆ ಗಳಿಸಿರುವ ಡಾ.ಪ್ರಭಾಕರ ಕೋರೆಯವರು ಬೆಳಗಾವಿಯ ಕೆಎಲ್‌ಇ ಸೊಸೈಟಿಯ ಹೆಸರನ್ನು ಇಡೀ ವಿಶ್ವದಲ್ಲಿ ಪ್ರಸಿದ್ಧಿ ಪಡಿಸಿರುವುದು ಹೆಮ್ಮೆಯ ಸಂಗತಿ. ಈ ನಾಡಿಗೆ ದೇಶಕ್ಕೆ ಅಪಾರ ಕೀರ್ತಿ ತಂದಿರುವ ಸಾಧನೆಯ ಶಿಖರ ಡಾ.ಕೋರೆಯವರಿಗೆ ‘ಶ್ರೀ ಹೆಚ್.ಡಿ.ದೇವೇಗೌಡ ಪ್ರಶಸ್ತಿ’ಯನ್ನು ನೀಡಿ ಅಭಿನಂದಿಸಲಾಗಿದೆ. ಈ ಪ್ರಶಸ್ತಿಗೆ ಪುರಸ್ಕೃತರಾದ ಡಾ.ಪ್ರಭಾಕರ ಕೋರೆಯವರನ್ನು ಕೆಎಲ್‌ಇ ಆಡಳಿತ ಮಂಡಳಿ ಸರ್ವ ಸದಸ್ಯರು ಅಭಿನಂದಿಸಿದ್ದಾರೆ.

Related Articles

Back to top button