
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ “ಅಲ್-ಇಮ್ದಾದಿ” ಶೈಕ್ಷಣಿಕ ಮತ್ತು ಸಾಮಾಜಿಕ ಕಲ್ಯಾಣ ಸಮಾಜ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಭಾನುವಾರ ಚಾಲನೆಯನ್ನು ನೀಡಿದರು.

ಕೊರೋನಾ ಸಂದರ್ಭದಲ್ಲಿ ರಕ್ತದ ಕೊರತೆ ತೀವ್ರವಾಗಿದೆ. ಹಾಗಾಗಿ ಯುವಕರು ರಕ್ತದಾನಕ್ಕೆ ಮುಂದೆ ಬರಬೇಕು. ಇದರಂತಹ ದಾನ ಮತ್ತೊಂದಿಲ್ಲ. ರಕ್ತದಾನದಿಂದ ಎಷ್ಟೋ ಜನರ ಜೀವ ಉಳಿಸಲು ಸಾಧ್ಯ ಎಂದು ಹೆಬ್ಬಾಳಕರ್ ಹೇಳಿದರು.