
ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಶಿವಸೇನೆ ನಾಯಕ ಏಕನಾಥ್ ಶಿಂಧೆ ವಿಶ್ವಾಸಮತ ಯಾಚನೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಇಂದು ನಡೆದ ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಮಾಡಲಾಗಿದ್ದು, ಏಕನಾಥ್ ಶಿಂಧೆ ಸರ್ಕಾರ ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ತೆರೆ ಬಿದ್ದಂತಾಗಿದೆ.
ವಿಶ್ವಾಸಮತಯಾಚನೆ ವೇಳೆ ಏಕನಾಥ್ ಶಿಂಧೆ ಪರವಾಗಿ 164 ಮತಗಳು ಬಂದವು. ಹೀಗಾಗಿ ಅಗತ್ಯಕ್ಕಿಂತ ಹೆಚ್ಚು ಶಾಸಕರು ಬೆಂಬಲ ನೀಡಿದ್ದಾರೆ. ಇನ್ನು ಬಿಜೆಪಿಯ ರಾಹುಲ್ ನಾರ್ವೇಕರ್ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ