Latest

ವಿದ್ಯುತ್ ತಂತಿ ತಗುಲಿ ಅಣ್ಣ-ತಮ್ಮ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಕೋಲಾರ: ವಿದ್ಯುತ್ ತಂತಿ ಸ್ಪರ್ಶಿಸಿ ಅಣ್ಣ-ತಮ್ಮ ಇಬ್ಬರೂ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿಎಫ್ ನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ.

30 ವರ್ಷದ ರಮೆಶ್ ಹಾಗೂ 28 ವರ್ಷದ ಮುರಳಿ ಮೃತ ಸಹೋದರರು. ಲಕ್ಷ್ಮೀಸಾಗರ ಗ್ರಾಮದ ನಿವಾಸಿಗಳಾಗಿರುವ ಸಹೋದರರು ತೋಟಕ್ಕೆ ಹೋಗಿದ್ದಾಗ ದುರಂತ ಸಂಭವಿಸಿದೆ.

ತೋಟಕ್ಕೆ ಅಳವಡಿಸಿದ್ದ ಸೌರ ಬೇಲಿ ಮೇಲೆ ವಿದ್ಯುತ್ ತಂತಿ ಬಿದ್ದಿತ್ತು. ಸೌರ ಬೇಲಿ ಮುಟ್ಟಿದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ. ಸ್ಥಳದಲ್ಲೇ ಅಣ್ಣ-ತಮ್ಮ ಇಬ್ಬರೂ ಕೊನೆಯುಸಿರೆಳೆದಿದ್ದಾರೆ.

ರಾಬರ್ಟ್ ಸನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಕತ್ತಿದ್ದರೆ ಸಿದ್ದರಾಮಯ್ಯ ಮತ್ತೆ ಬಾದಾಮಿಯಲ್ಲಿ ಸ್ಪರ್ಧಿಸಲಿ; ಸವಾಲು ಹಾಕಿದ ಬಿಜೆಪಿ ರಾಜ್ಯಾಧ್ಯಕ್ಷ

https://pragati.taskdun.com/politics/nalin-kumar-kateelsiddaramaiahh-d-kumaraswamy/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button