Belagavi NewsBelgaum News

*ಬೆಳಗಾವಿಯಲ್ಲಿ ಮತ್ತೊಂದು ಅನಾಹುತ; ವಿದ್ಯುತ್ ತಂತಿ ತಿಳಿದು ರೈತ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲೆಯ ಕಿತ್ತೂರಿನಲ್ಲಿ ನಡೆದಿದೆ.

Home add -Advt

ಇಲ್ಲಿನ ಹಿರೇನದಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ದಾಸನಕೊಪ್ಪ ಎಂಬುವವರು ಜಮೀನಿಗೆ ಹೋದಾಗ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾರೆ.

ಬಿರುಗಾಳಿಯಿಂದ ಜಮೀನಿನಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದನ್ನು ಗಮನಿಸಿದೇ ಏಕಾಏಕಿ ವಿದ್ಯುತ್ ತಂತಿ ತುಳಿದ ರೈತ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Related Articles

Back to top button