Karnataka NewsLatest

*ಕರೆಂಟ್ ಶಾಕ್ ಗೆ ಇಬ್ಬರು ಸಾವು: ಕಳ್ಳತನ ಮಾಡಲು ಹೋಗಿ ದುರಂತ?*

ಪ್ರಗತಿವಾಹಿನಿ ಸುದ್ದಿ: ಮಳೆ ಅಬ್ಬರದ ನಡುವೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೃಷ್ಣಾಪುಅರ ಗ್ರಾಮದ ತೋಟದಲ್ಲಿ ನಡೆದಿದೆ.

ಮಧ್ಯಪ್ರದೇಶ ಮೂಲದ ಮೋಹಿತ್ (24) ಹಾಗೂ ಕತರ್ವ (38) ಮೃತರು. ಜಯರಾಂ ಎಂಬುವವರ ತೋಟದಲ್ಲಿ ಈ ದುರಂತ ಸಂಭವಿಸಿದೆ.

ಕೃಷ್ಣಾಪುರ ಗ್ರಾಮದ ಜಯರಾಂ ಅವರ ಅಡಿಕೆ ತೋಟದಲ್ಲಿ ಕೆಲವು ಶ್ರೀಗಂಧದ ಮರಗಳನ್ನು ಹಾಕಲಾಗಿತ್ತು. ಶ್ರೀಗಂಧ ಮರ ಕಳ್ಳತನಕ್ಕೆ ಬಂದು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಅಬ್ಬಿನಹೊಳೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Home add -Advt
https://pragativahini.com/bengalururainkarnataka


Related Articles

Back to top button