Karnataka NewsLatest

*ಕರೆಂಟ್ ಶಾಕ್ ಗೆ ಇಬ್ಬರು ಸಾವು: ಕಳ್ಳತನ ಮಾಡಲು ಹೋಗಿ ದುರಂತ?*

ಪ್ರಗತಿವಾಹಿನಿ ಸುದ್ದಿ: ಮಳೆ ಅಬ್ಬರದ ನಡುವೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೃಷ್ಣಾಪುಅರ ಗ್ರಾಮದ ತೋಟದಲ್ಲಿ ನಡೆದಿದೆ.

ಮಧ್ಯಪ್ರದೇಶ ಮೂಲದ ಮೋಹಿತ್ (24) ಹಾಗೂ ಕತರ್ವ (38) ಮೃತರು. ಜಯರಾಂ ಎಂಬುವವರ ತೋಟದಲ್ಲಿ ಈ ದುರಂತ ಸಂಭವಿಸಿದೆ.

ಕೃಷ್ಣಾಪುರ ಗ್ರಾಮದ ಜಯರಾಂ ಅವರ ಅಡಿಕೆ ತೋಟದಲ್ಲಿ ಕೆಲವು ಶ್ರೀಗಂಧದ ಮರಗಳನ್ನು ಹಾಕಲಾಗಿತ್ತು. ಶ್ರೀಗಂಧ ಮರ ಕಳ್ಳತನಕ್ಕೆ ಬಂದು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಅಬ್ಬಿನಹೊಳೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

https://pragativahini.com/bengalururainkarnataka


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button