Kannada NewsKarnataka NewsLatest

*ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿ ಸಾವು*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

12 ವರ್ಷದ ಮೊಹಮ್ಮದ್ ಶಾ ಗೌಸ್ ಮೃತ ಬಾಲಕ. ಘಟನೆಯಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾವೇರಿ ಜಿಲ್ಲೆಯ ಹಿರೆಕೇರೂರು ಹಂಸಬಾವಿ ಗ್ರಾಮದ ಮೃತ್ಯುಂಜಯ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಧ್ಯಾಹ್ನ ಊಟದಕ್ಕೆ ಬಿಟ್ಟಿದ್ದ ವೇಳೆ ಈ ದುರಂತ ಸಂಭವಿಸಿದೆ.

Home add -Advt


Related Articles

Back to top button