Kannada NewsKarnataka NewsLatest

*ಅರಣ್ಯ ಇಲಾಖೆ ಸಿಬ್ಬಂದಿ ಮೇಲೆಯೇ ಆನೆ ದಾಳಿ; ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ; ಹಾಸನ: ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡಲು ಮುಂದಾಗಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯ ಮೇಲೆಯೇ ಆನೆ ದಾಳಿ ನಡೆಸಿದ್ದು, ಸಿಬ್ಬಂದಿ ಬಲಿಯಾಗಿರುವ ಘಟನೆ ನಡೆದಿದೆ.

ವೆಂಕಟೇಶ್ ಮೃತ ಅರಣ್ಯ ಇಲಾಖೆ ಸಿಬ್ಬಂದಿ. ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರಿನಲ್ಲಿ ಈ ದುರಂತ ಸಂಭವಿಸಿದೆ.

ಗಾಯಗೊಂಡಿದ್ದ ಕಾಡಾನೆ ಭೀಮನಿಗೆ ಚಿಕಿತ್ಸೆ ನೀಡಲೆಂದು ಅರಣ್ಯ ಇಲಖೆ ಸಿಬ್ಬಂದಿ ಕಾಡಾನೆ ಹಿಡಿಯಲು ಯತ್ನಿಸಿದ್ದು, ಈ ವೇಳೆ ಸಿಬ್ಬಂದಿ ವೆಂಕಟೇಶ್ ಆನೆಗೆ ಅರವಳಿಕೆ ಮದ್ದು ನೀಡಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಆನೆ ಏಕಾಏಕಿ ಅವರ ಮೇಲೆಯೇ ದಾಳಿ ನಡೆಸಿದೆ.

ಆನೆ ದಾಳಿಯಿಂದ ಗಂಭೀರ ಸ್ಥಿತಿ ತಲುಪಿದ್ದ ವೆಂಕಟೇಶ್ ಅವರನ್ನು ತಕ್ಷಣ ಹಾಸನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button