Latest

*ಕಾಡಾನೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಯೇ ಬಲಿ; ಓರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿಯೇ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಮೇಟಿಕುಪ್ಪ ಅರಣ್ಯದಲ್ಲಿ ನಡೆದಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸೊಳ್ಳಾಪುರ ಗ್ರಾಮದ ಬಳಿ ಈ ದುರಂತ ಸಂಭವಿಸಿದೆ. ಅರಣ್ಯ ಸಿಬ್ಬಂದಿ ಮೇಲೆ ತಡರಾತ್ರಿ ಕಾಡಾನೆ ದಾಳಿ ನಡೆಸಿದೆ. ಕಳೆದ 10 ವರ್ಷಗಳಿಂದ ಹಂಗಾಮಿ ವಾಚರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ವಾಚರ್ ಮಹದೇವಸ್ವಾಮಿ (36) ಮೃತಪಟ್ಟಿದ್ದಾರೆ. ಮತ್ತೋರ್ವ ವಾಚರ್ ರಾಜೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

*ಮಹದಾಯಿ ವಿಚಾರ; ಈಗ ಲೋಪದೋಷ ಹುಡುಕುವುದು ಕಾಂಗ್ರೆಸ್ ಮನಸ್ಥಿತಿಯನ್ನು ತೋರುತ್ತದೆ; ಸಿಎಂ ಕಿಡಿ*

https://pragati.taskdun.com/mahadaicm-basavaraj-bommaireactionhubli/

Related Articles

Back to top button