Belagavi NewsBelgaum NewsKannada NewsKarnataka News

*ಉಪನೋಂದಣಾಧಿಕಾರಿ ಅಮಾನತಿಗೆ ಶಿಫಾರಸು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭೂ ನೋಂದಣಿ ವಂಚನೆ ಪ್ರಕರಣವೊಂದರಲ್ಲಿ ಬೆಳಗಾವಿ ದಕ್ಷಿಣ ಉಪನೋಂದಣಾಧಿಕಾರಿಯನ್ನು ಅಮಾನತು ಮಾಡುವಂತೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಶಿಫಾರಸು ಮಾಡಿದ್ದಾರೆ.

ನಕಲಿ ದಾಖಲೆಗಳು ಮತ್ತು ನಕಲಿ ಸಹಿಗಳನ್ನು ಬಳಸಿ ಆಸ್ತಿ ನೋಂದಣಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Home add -Advt

2026ರ ಏಪ್ರಿಲ್ 24ರಂದು ಅಂಕಲಗಿ ಗ್ರಾಮದಲ್ಲಿರುವ 9 ಏಕರೆ 33 ಗುಂಟೆ ಜಮೀನನ್ನು 39 ವರ್ಷಗಳ ಹಿಂದೆ ಮೃತಪಟ್ಟಿದ್ದರೆಂದು ಹೇಳಲಾಗಿರುವ ವ್ಯಕ್ತಿ ಹೆಸರಿನಲ್ಲಿ ನೋಂದಣಿ ಮಾಡಲಾಗಿತ್ತು. ಇದೇ ಮೃತ ವ್ಯಕ್ತಿಗೆ ಸಂಬಂಧಿಸಿದ ಮತ್ತೊಂದು ಸಮಾನ ಪ್ರಕರಣವನ್ನು ಈ ಹಿಂದೆ ನ್ಯಾಯಾಲಯದ ಸೂಚನೆ ಬಳಿಕ ರದ್ದುಪಡಿಸಲಾಗಿತ್ತು.

ಇದೀಗ ಜಿಲ್ಲಾಧಿಕಾರಿಗಳು ಎಫ್‌ಐಆರ್ ದಾಖಲಿಸಲು ಸೂಚನೆ ನೀಡಿದ್ದು, ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಾಖಲೆ ಪರಿಶೀಲನೆ ಮತ್ತು ಭದ್ರತಾ ಕ್ರಮಗಳಲ್ಲಿ ಗಂಭೀರ ನಿರ್ಲಕ್ಷ್ಯ ನಡೆದಿದೆ ಎಂದು ಉಲ್ಲೇಖಿಸಿ, ಅಮಾನತಿಗೆ ಶಿಫಾರಸು ಮಾಡಿದ್ದಾರೆ.

Related Articles

Back to top button