
ಪ್ರಗತಿವಾಹಿನಿ ಸುದ್ದಿ; ಮೂಡಬಿದರೆ: ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಬಿದರೆ ಪುರಸಭೆ ವ್ಯಾಪ್ತಿಯಲ್ಲಿ ನಡೆದಿದೆ.
21 ವರ್ಷದ ಸಾತ್ವಿಕ್ ಆತ್ಮಹತ್ಯೆ ಮಾಡಿಕೊಂದಿರುವ ವಿದ್ಯಾರ್ಥಿ. ಮೂಡಬಿದರೆಯ ಎಸ್.ಎನ್.ಎಂ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ ಸಾತ್ವಿಕ್ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ.
ಮನೆಯ ರೂಮಿನಲ್ಲಿಯೇ ಸಾತ್ವಿಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರನ ತಿಳಿದುಬಂದಿಲ್ಲ. ಮೂಡಬಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ