Kannada NewsLatest

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿನಾಯಿತಿ: ಸರಕಾರದ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಎಸ್ಎಎಸ್ ಎಲ್ ಸಿ ಪರೀಕ್ಷೆ ಬರೆಯುವುದಕ್ಕೆ ವಿದ್ಯಾರ್ಥಿಗಳು ಕನಿಷ್ಟ ಶೇ.75ರಷ್ಟು ಹಾಜರಾತಿ ಹೊಂದುವುದು ಕಡ್ಡಾಯ ಎನ್ನುವ ನಿಯಮವಿದೆ.

ಆದರೆ ಈ ವರ್ಷ ಕೊರೋನಾದಿಂದಾಗಿ ಶಾಲೆಗಳೇ ಸರಿಯಾಗಿ ನಡೆದಿಲ್ಲ. ಜನೆವರಿ 1ರಿಂದ  ಎಸ್ಎಸ್ಎಲ್ ಸಿ ತರಗತಿಗಳು ಆರಂಭವಾದರೂ ವಿದ್ಯಾರ್ಥಿಗಳು ಶಾಲೆಗೆ ಬರುವುದನ್ನು ಕಡ್ಡಾಯಗೊಳಿಸಿರಲಿಲ್ಲ.

ಹಾಗಾಗಿ ಈ ಬಾರಿ ಶೇ. 75ರಷ್ಟು ಹಾಜರಾತಿ ಕಡ್ಡಾಯ ಎನ್ನುವ ನಿಯಮ ಜಾರಿಗೊಳಿಸುವುದು ಸಾಧ್ಯವೇ ಇಲ್ಲ. ಹಾಗಾಗಿ ಪರೀಕ್ಷಾ ಶುಲ್ಕ ಪಾವತಿಸುವ ಎಲ್ಲ ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಸರಕಾರ ಆದೇಶ ಹೊರಡಿಸಿದೆ.

 

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button