*ಬೆಳಗಾವಿಯಲ್ಲಿ ಘೋರ ದುರಂತ: ಸಿಡಿಮದ್ದು ಸ್ಫೋಟಗೊಂಡು ವ್ಯಕ್ತಿ ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಏಕಾಏಕಿ ಸ್ಫೋಟಗೊಂಡು ವ್ಯಕ್ತಿಯೋರ್ವರು ಬೆಂಕಿಯಲ್ಲಿ ಸಜೀವವಾಗಿ ದಹನವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಗೋಕಾಕ್ ತಾಲೂಕಿನ ಪಾಮಲದಿನ್ನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38) ಮೃತರು. ಪಂಚಮಿ ಹಬ್ಬಕ್ಕಾಗಿ ಸಿಡಿಮದ್ದು ತಯಾರಿಸುತ್ತಿದ್ದರು. ಈ ವೇಳೆ ಸಿಡಿಮದ್ದು ಇದ್ದಕ್ಕಿದ್ದಂತೆ ಸ್ಫೋಟಗೊಂಡು ಮಲ್ಲಪ್ಪ ಬೆಂಕಿಯಲ್ಲಿ ಸುಟ್ಟುಹೋಗಿದ್ದಾರೆ. ಘಟನಾ ಸ್ಥಳಕ್ಕೆ ಘಟಪ್ರಭಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. *ಖ್ಯಾತ ನಿರ್ದೇಶಕ ವಿನೋದ್ ದೊಂಡಾಲೆ ಆತ್ಮಹತ್ಯೆ*