Latest

ಹಲಗಾದಲ್ಲಿ ಮೃಣಾಲ್ ಹೆಬ್ಬಾಳ್ಕರ್ ಸೇರಿ ಹಲವು ರೈತರ ಬಂಧನ; ಅಧಿಕಾರಗಳ ವಿರುದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಹಲಗಾದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ವಿವಾದ ವಿಕೋಪಕ್ಕೆ ಹೋಗಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪುತ್ರ ಮೃಣಾಲ್ ಸೇರಿದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾವುದೇ ಕಾರಣದಿಂದ ರೈತರ ಜಮೀನು ವಶಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಲಕ್ಷ್ಮಿ ಹೆಬ್ಬಾಳಕರ್ ಗುಡುಗಿದ್ದಾರೆ.

Home add -Advt

ರೈತರ ಜಮೀನಿನಲ್ಲಿ ಮತ್ತು ಜನವಸತಿ ಪ್ರದೇಶದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗೆ ಲಕ್ಷ್ಮಿ ಹೆಬ್ಬಾಳಕರ್ ಮೊದಲಿನಿಂದಲೂ ವಿರೋಧಿಸುತ್ತ ಬಂದಿದ್ದಾರೆ.

ಅಲ್ಲದೆ ಹತ್ತಿರದಲ್ಲೇ ಸುವರ್ಣ ವಿಧಾನಸೌಧವೂ ಇದೆ. ಹಾಗಾಗಿ ಈ ಸಂಬಂಧ ಸಮಿತಿ ರಚಿಸಿ ನಿರ್ಧಾರ ಮಾಡಲು ನಿರ್ಧರಿಸಲಾಗಿತ್ತು.ಆದರ ನಿನ್ನೆ ಏಕಾಏಕಿ ಜಮೀನು ಸ್ವಾಧೀನಕ್ಕೆ ಹೋದಾಗ ರೈತರು ಪ್ರತಿಭಟಿಸಿದ್ದಾರೆ. ವಾಪಸ್ ಬಂದ ಅಧಿಕಾರಿಗಳು ಇಂದು ಪೊಲೀಸ್ ಬಲದೊಂದಿಗೆ ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಮೃಣಾಲ ಹೆಬ್ಬಾಳಕರ್ ಮತ್ತು ರೈತರು ಪ್ರತಿಭಟಿಸಿದ್ದಾರೆ.

ಪೊಲೀಸರು ಅವರನ್ನೆಲ್ಲ ವಶಕ್ಕೆ ಪಡೆದು ಎಪಿಎಂಸಿ ಪೊಲೀಸ್ ಠಾಣಗೆ ಕರೆದೊಯ್ದಿದ್ದಾರೆ.

ನಾನ್ನಿಲ್ಲದಾಗ ಏಕೆ?:

ಏಕಾಏಕಿ ರೈತರ ಜಮೀನು ವಶಪಡಿಸಿಕೊಳ್ಳುವ ಪ್ರಯತ್ನವನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ತೀವ್ರವಾಗಿ ಖಂಡಿಸಿದ್ದಾರೆ. ನಾನು ಊರಲ್ಲಿಲ್ಲದಾಗ ಅಧಿಕಾರಿಗಳು ಭೂ ಸ್ವಾಧೀನಕ್ಕೆ ಹೋಗಿದ್ದಾರೆ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿವೆ. ಯಾವುದೇ ಕಾರಣದಿಂದ ರೈತರ ಭೂಮಿ ವಶಪಡಿಸಿಕೊಳ್ಳಲು ಅವಕಾಶ ಕೊಡುವುದಿಲ್ಲ. ಹಲಗಾದಲ್ಲಿ ತ್ಯಾಜ್ಯ ವಿಲೇವಾರ ಘಟಕ ಸ್ಥಾಪನೆಗೆ ಅವಕಾಶ ಕೊಡುವುದಿಲ್ಲ ಎಂದು ಹೆಬ್ಬಾಳಕರ್ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.

Related Articles

Back to top button