Kannada NewsKarnataka NewsLatestPolitics

*ಮತ್ತೊಂದು ಭೀಕರ ಬೆಂಕಿ ಅವಘಡ; ಮುಗಿಲೆತ್ತರಕ್ಕೆ ಹೊತ್ತಿ ಉರಿದ ಕಾರ್ಖಾನೆ*

ಪ್ರಗತಿವಾಹಿನಿ ಸುದ್ದಿ: ಯಾದಗಿರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿ ಕಾರ್ಖಾನೆಗೆ ಬೆಂಕಿ ಬಿದ್ದ ಪರಿಣಾಮ ಇಡೀ ಕಾರ್ಖಾನೆ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.

ಬಡಿಯಾಲ್ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಚ್ಚಾ ವಸ್ತುಗಳನ್ನು ಕರಗಿಸಿ ಪುಡಿ ಮಾಡುವ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಿಯಾಕ್ಟರ್ ಅನ್ ಲೋಡ್ ಮಾಡುವಾಗ ಈ ಘಟನೆ ನಡೆದಿದೆ.

ಬೆಂಕಿಯ ತೀವ್ರತೆಗೆ ಫ್ಯಾಕ್ಟರಿ ತುಂಬೆಲ್ಲಾ ಬೆಂಕಿ ಹೊತ್ತಿಕೊಂಡಿದ್ದು, ಮುಗಿಲೆತ್ತರದವರೆಗೂ ಧಗಧಗಿಸಿ ಉರಿದಿದೆ. ಸ್ಥಳಕ್ಕೆ ಪೊಲಿಸರು, ಅಗ್ನಿಶಾಮಕ ಸಿಬ್ಬದಿ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button