Latest

ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಎರಡನೇ ಬಾರಿಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ದೆಹಲಿ ವಿಶೇಷ ನ್ಯಾಯಾಲಯ ಡಿ.ಕೆ.ಶಿವಕುಮಾರ್ ಸೇರಿದಂತೆ ಐದು ಜನರಿಗೆ ಸಮನ್ಸ್ ಜಾರಿ ಮಾಡಿದೆ.

Home add -Advt

ಸಚಿನ್ ನಾರಾಯಣ್, ಸುನೀಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಹಾಗೂ ರಾಜೇಂದ್ರಗೆ ಅವರಿಗೂ ಕೋರ್ಟ್ ಸಮನ್ಸ್ ಜಾರಿ ಮಾಡಿದ್ದು, ಜುಲೈ 1ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

Related Articles

Back to top button