Latest

ಕೇಂದ್ರದ ಪ್ರಸ್ತಾಪವನ್ನು ತಿರಸ್ಕರಿಸಿದ ರೈತರು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಕೃಷಿ ತಿದ್ದುಪಡಿ ಕಾಯ್ದೆಗೆ 8 ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಸಿದ್ಧವಾಗಿದ್ದು, ಈ ಕುರಿತು ನೀಡಿದ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ.

ಕಳೆದ 14ದಿನಗಳಿಂದ ಸಿಂಘು ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ರೈತರಿಗೆ ಲಿಖಿತ ರೂಪದ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಲುಪಿಸಿದ್ದು, ಇದನ್ನು ತಿರಸ್ಕರಿಸಿರುವ ರೈತ ಮುಖಂಡರು ಡಿಸೆಂಬರ್ 14ರಂದು ರಾಷ್ಟ್ರವ್ಯಾಪಿ ಧರಣಿಗೆ ಕರೆ ನೀಡಿದ್ದಾರೆ.

ಈ ನಡುವೆ ರಾಷ್ಟ್ರಪತಿ ಭವನಕ್ಕೆ ಶರತ್ ಪವಾರ್ ನೇತೃತ್ವದ 5 ವಿಪಕ್ಷಗಳ ನಾಯಕರು ಭೇಟಿ ನೀಡಿದ್ದು, ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಮನವಿ ಸಲ್ಲಿಸುವ ಸಾಧ್ಯತೆಯಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button