Latest

ಬಾಲಿವುಡ್ ನಟ-ನಟಿಯರು, ಕ್ರಿಕೆಟಿಗರ ವಿರುದ್ಧ ಕಿಡಿಕಾರಿದ ನಟ ಚೇತನ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರು ಕಳೆದ ಕೆಲ ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ನೂರಾರು ರೈತರು ಸಾವನ್ನಪ್ಪಿದ್ದಾರೆ. ಆದಾಗ್ಯೂ ಈ ವರೆಗೆ ರೈತರ ಪರ ಒಂದೇ ಒಂದು ಮಾತನಾಡದ ಬಾಲಿವುಡ್ ನಟ-ನಟಿಯರು, ಕ್ರಿಕೆಟ್ ತಾರೆಯರು ಇದೀಗ ಪಾಪ್ ಗಾಯಕಿ ನೀಡಿದ ಒಂದು ಟ್ವೀಟ್ ಬೆನ್ನಲ್ಲೇ ರಾಷ್ಟ್ರೀಯತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಡಿಕಾರಿರುವ ಸ್ಯಾಂಡಲ್ ವುಡ್ ನಟ ಚೇತನ್ ಬಾಲಿವುಡ್ ಹಾಗೂ ಕ್ರಿಕೆಟ್ ತಾರೆಯರ ವಿರುದ್ಧ ಗುಡುಗಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ಮಾಡಿರುವ ಚೇತನ್, ಸ್ವಾರ್ಥ ಹಾಗೂ ಬೌಧಿಕ ದಿವಾಳಿತನದಲ್ಲಿ ಕ್ರಿಕೆಟ್ ತಾರೆಯರು ಭಾರತೀಯ ಚಿತ್ರರಂಗದ ನಟರನ್ನು ಮೀರಿಸುತ್ತಾರೆ. ಚೆಂಡಿನೊಂದಿಗೆ ಆಟವಾಡಲು ಮೆದುಳು ಅಥವಾ ಹೃದಯದ ಅವಶ್ಯಕತೆ ಹೆಚ್ಚಿಲ್ಲ ಎಂಬುದು ನಮಗೂ ಗೊತ್ತು ಎಂದು ಹೇಳುವ ಮೂಲಕ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯಲ್ಲಿನ ರೈತರ ಹೋರಾಟಕ್ಕೆ ಸಂಬಂಧಿಸಿದಂತೆ ಪಾಪ್ ಗಾಯಕಿ ರಿಹಾನ್ನಾ ಟ್ವೀಟ್ ಮಾಡಿತ್ತಿದ್ದಂತೆ ಬಾಲಿವುಡ್ ನಟ-ನಟಿಯರು, ಕ್ರಿಕೆಟ್ ತಾರೆಯರು ರಾಷ್ಟ್ರೀಯತೆ ಮಾತನಾಡುತ್ತಿದ್ದು, ರಿಹಾನ್ನಾ ಹೇಳಿಕೆಗೆ ಕಿಡಿಕಾರಿದ್ದರು. ರಿಹಾನ್ನಾ ಟ್ವೀಟ್ ದೇಶಾದ್ಯಂತ ಹಲವು ಚರ್ಚೆಗೆ ಕಾರಣವಾಗಿದೆ.

ರಾಜ್ಯಾದ್ಯಂತ ಹೆದ್ದಾರಿ ಬಂದ್ ಪ್ರತಿಭಟನೆ ಆರಂಭ; ಕೇಂದ್ರದ ವಿರುದ್ಧ ರೈತರ ಆಕ್ರೋಶ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button