*ಮಗನನ್ನೇ ಕೊಲೆ ಮಾಡಿ ಶವವನ್ನು ಬೆಂಕಿ ಹಚ್ಚಿ ಸುಟ್ಟ ಪೋಷಕರು: ತಂದೆ, ತಾಯಿ, ಸಹೋದರ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕುಡಿದು ಬಂದು ನಿತ್ಯ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಮಗನಿಗೆ ಕುಟುಂಬಸ್ಥರಿಂದಲೇ ಚಟ್ಟ ಕಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಿದರಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಡೀಸೆಲ್ ಸುರಿದು ಬೆಂಕಿ ಹಚ್ಚಿ ಅನಿಲ್ ಪರಪ್ಪ ಕಾನಟ್ಟಿ(32) ಎಂಬಾತನ ಕೊಲೆ ಮಾಡಲಾಗಿದೆ.  ಪ್ರಕರಣ ಸಂಬಂಧ ತಂದೆ ಪರಪ್ಪ ಕಾನಟ್ಟಿ, ತಾಯಿ ಶಾಂತಾ ಕಾನಟ್ಟಿ ಮತ್ತು ಸಹೋದರ ಬಸವರಾಜ ಕಾನಟ್ಟಿಯನ್ನು ಬಂಧಿಸಲಾಗಿದೆ. ಸಾವಳಗಿ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Home add -Advt ಕೊಲೆಯಾದ ಅನಿಲ್ ದುಶ್ಚಟಕ್ಕೆ … Continue reading *ಮಗನನ್ನೇ ಕೊಲೆ ಮಾಡಿ ಶವವನ್ನು ಬೆಂಕಿ ಹಚ್ಚಿ ಸುಟ್ಟ ಪೋಷಕರು: ತಂದೆ, ತಾಯಿ, ಸಹೋದರ ಅರೆಸ್ಟ್*