Latest

*ಮಗನನ್ನೇ ಇರಿದು ಕೊಂದ ತಂದೆ*

ಪ್ರಗತಿವಾಹಿನಿ ಸುದ್ದಿ; ಕೋಲಾರ: ತಂದೆಯೊಬ್ಬ ಮಗನನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.

9 ವರ್ಷದ ಭುವನ್ ಮೃತ ಬಾಲಕ. ಬಾಲಸುಬ್ರಹ್ಮಣ್ಯಂ ಮಗನನ್ನೇ ಹತ್ಯೆಗೈದ ತಂದೆ. ಮಾನಸಿಕ ಅಸ್ವಸ್ಥನಾಗಿದ್ದ ಬಾಲಸುಬ್ರಹ್ಮಣ್ಯಂ ಈ ಹಿಂದೆ ಪತ್ನಿಯನ್ನೇ ಕೊಲೆಗೈದು ಜೈಲುವಾಸ ಅನುಭವಿಸಿದ್ದ. ಈಗ ಮಗನನ್ನೇ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ ಎನ್ನಲಾಗಿದೆ. 9 ವರ್ಷದ ಬಾಲಕನನ್ನು ತಂದೆಯೇ ಕೊಲ್ಲಲು ನಿಖರ ಕಾರಣ ತಿಳಿದುಬಂದಿಲ್ಲ

ನಂಗಲಿ ಪೊಲೀಸರು ಆರೋಪಿ ಬಾಲಸುಬ್ರಹ್ಮಣ್ಯಂ ನನ್ನು ಬಂಧಿಸಿ, ತನಿಖೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button