Latest

*ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಂದೆ*

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೋಚಾವರಂ ನಲ್ಲಿ ನಡೆದಿದೆ.

ಹಣಮಂತ (36) ಹಾಗೂ ಮಕ್ಕಳಾದ ಓಂಕಾರ್ (9), ಅಕ್ಷತಾ (6) ಮೃತರು. ಹಣಮಂತ ಹೈದರಾಬಾದ್ ನಲ್ಲಿ ಕೆಲಸ ಮಾಡುತ್ತಿದ್ದರು. ಎರಡು ದಿನಗಳ ಹಿಂದಷ್ಟೇ ಪತ್ನಿಯನ್ನು ಬಿಟ್ಟು ಸ್ವಗ್ರಾಮಕ್ಕೆ ಬಂದಿದ್ದರು. ಈಗ ಮಕ್ಕಳ ಜೊತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

Home add -Advt

ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


Related Articles

Back to top button