Latest

ಚಲಿಸುತ್ತಿದ್ದ ಬಸ್ ನಲ್ಲಿ ಯುವತಿಯನ್ನು ಚುಂಬಿಸಿದ ಅಪರಿಚಿತ; ಯುವಕನ ವಿರುದ್ಧ ದಾಖಲಾಯ್ತು ಕೇಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಳ್ಳಾರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ನಲ್ಲಿ ಅಪರಿಚಿತ ಯುವಕನೊಬ್ಬ ಯುವತಿಗೆ ಮುತ್ತಿಟ್ಟು ಬಸ್ ಇಳಿದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತಿದ್ದ ಬಳ್ಳಾರಿ ಮೂಲದ ವಿದ್ಯಾರ್ಥಿನಿ ಗೌರಿ-ಗಣೇಶ ಹಬ್ಬಕ್ಕೆಂದು ಊರಿಗೆ ಹೋಗಿ ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ವಾಪಸ್ ಆಗುತ್ತಿದ್ದಳು. ಈ ವೇಳೆ ಯುವತಿ ಪಕ್ಕದ ಸೀಟ್ ನಲ್ಲಿಯೇ ಕುಳಿತು ತೆಲುಗಿನ ‘ಗೀತ ಗೋವಿಂದಂ’ ಸಿನಿಮಾ ವೀಕ್ಷಿಸುತ್ತಿದ್ದ ಯುವಕ, ಟಿ.ದಾಸರಹಳ್ಳಿ-ಜಾಲಹಳ್ಳಿ ಕ್ರಾಸ್ ಬಳಿ ಸಿನಿಮಾ ಸ್ಟೈಲ್ ನಲ್ಲೇ ಯುವತಿ ಕೆನ್ನೆಗೆ ಮುತ್ತಿಟ್ಟು ತಕ್ಷಣ ಬಸ್ ನಿಂದ ಇಳಿದುಬಿಟ್ಟಿದ್ದಾನೆ.

Related Articles

ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಯುವತಿ ಮಾನಹಾನಿ ಆರೋಪದಡಿ ಯುವಕನ ವಿರುದ್ಧ ಪೀಣ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಅಪರಿಚಿತ ಯುವಕನ ವಿರುದ್ಧ ಐಪಿಸಿ ಸೆಕ್ಷನ್ 354A, 354ರಡಿ ಪ್ರಕರಣ ದಾಖಲಾಗಿದೆ.

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಗೆ ಮತ್ತೆ ಇಡಿ ಸಮನ್ಸ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button