Kannada NewsKarnataka NewsLatest

ವೈದ್ಯಕೀಯ ಚಿಕಿತ್ಸೆಗಾಗಿ ಆರ್ಥಿಕ ನೆರವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಐವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಚೆಕ್ ಗಳನ್ನು ವಿತರಿಸಿದರು.
ಸುಳೇಬಾವಿಯ ಪ್ರಕಾಶ ಕಲ್ಲಪ್ಪ ಪಾಟೀಲ,  ಬಡಸ್ ಕೆಎಚ್ ನ ಈಶ್ವರ ಎಸ್ ಚನ್ನಬಸನ್ನವರ, ವಿಜನಗರದ ರುಕ್ಮಿಣಿ ಹನಮಂತ ಸಾವಂತ್, ನಾವಗೆಯ ಕೃಷ್ಣಾ ಕಮತೆ ಹಾಗೂ ಬಿಜಗರಣಿಯ
 ಜಾನಭಾಯಿ ನಾಮದೇವ ಪಾಟೀಲ  ಅವರಿಗೆ ಚೆಕ್ ಗಳನ್ನು ಹಸ್ತಾಂತರಿಸಲಾಯಿತು.
ಹೃದಯ ಚಿಕಿತ್ಸೆ, ಕ್ಯಾನ್ಸರ್ ಚಿಕಿತ್ಸೆ, ಕಣ್ಣಿನ ಚಿಕಿತ್ಸೆ ಮೊದಲಾದ ಕಾಯಿಲೆಗಳ ಆಸ್ಪತ್ರೆಯ ವೆಚ್ಚ ಭರಿಸುವುದಕ್ಕಾಗಿ ಈ ಸಹಾಯ ನೀಡಲಾಯಿತು.
 ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಈ ಎಲ್ಲರಿಗೆ ಆರ್ಥಿಕ ನೆರವನ್ನು ಮಂಜೂರು ಮಾಡಿಸುವಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಯಶಸ್ವಿಯಾಗಿದ್ದಾರೆ.
 ಆರೋಗ್ಯ ಮನುಷ್ಯನಿಗೆ ಅತ್ಯಂತ ಮಹತ್ವದ್ದು. ಆರೋಗ್ಯ ಸರಿ ಇಲ್ಲದಿದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ. ಹಾಗಾಗಿ ಆರೋಗ್ಯದ ವಿಷಯದಲ್ಲಿ ಯಾರೂ ನಿರ್ಲಕ್ಷ್ಯ ಮಾಡಬಾರದು. ಖಾಯಿಲೆ ಬಂದಾಗ ತಕ್ಷಣ ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ಜನರಲ್ಲಿ ವಿನಂತಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button