
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಐವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮಂಗಳವಾರ ಚೆಕ್ ಗಳನ್ನು ವಿತರಿಸಿದರು.

ಜಾನಭಾಯಿ ನಾಮದೇವ ಪಾಟೀಲ ಅವರಿಗೆ ಚೆಕ್ ಗಳನ್ನು ಹಸ್ತಾಂತರಿಸಲಾಯಿತು.
ಹೃದಯ ಚಿಕಿತ್ಸೆ, ಕ್ಯಾನ್ಸರ್ ಚಿಕಿತ್ಸೆ, ಕಣ್ಣಿನ ಚಿಕಿತ್ಸೆ ಮೊದಲಾದ ಕಾಯಿಲೆಗಳ ಆಸ್ಪತ್ರೆಯ ವೆಚ್ಚ ಭರಿಸುವುದಕ್ಕಾಗಿ ಈ ಸಹಾಯ ನೀಡಲಾಯಿತು.

ಆರೋಗ್ಯ ಮನುಷ್ಯನಿಗೆ ಅತ್ಯಂತ ಮಹತ್ವದ್ದು. ಆರೋಗ್ಯ ಸರಿ ಇಲ್ಲದಿದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ. ಹಾಗಾಗಿ ಆರೋಗ್ಯದ ವಿಷಯದಲ್ಲಿ ಯಾರೂ ನಿರ್ಲಕ್ಷ್ಯ ಮಾಡಬಾರದು. ಖಾಯಿಲೆ ಬಂದಾಗ ತಕ್ಷಣ ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ಜನರಲ್ಲಿ ವಿನಂತಿಸಿದರು.