Belagavi NewsBelgaum NewsKannada NewsKarnataka News

*ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಭಾಗ್ಯಶ್ರೀ ಚಿಕಿತ್ಸೆಗೆ ಆರ್ಥಿಕ ನೆರವು*

ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಭಾಗ್ಯಶ್ರೀ ಚಿಕಿತ್ಸೆಗೆ ಆರ್ಥಿಕ ನೆರವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಖಾನಾಪುರ ತಾಲೂಕಿನ ಲಾಲವಾಡಿ ಗ್ರಾಮದ ನಿವಾಸಿ ಜ್ಯೋತಿಬಾ ಉತ್ತೂರಕರ್ ಅವರ ಪುತ್ರಿ ಭಾಗ್ಯಶ್ರೀ ಅವರ ತುರ್ತು ಆರೋಗ್ಯ ಚಿಕಿತ್ಸೆಗೆ ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಲಾಯಿತು.

Home add -Advt


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವರು ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನೆರವಿನ ಚೆಕ್‌ ಅನ್ನು ಕುಟುಂಬದವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ಭಾಗ್ಯಶ್ರೀ ಅವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಿ ಆರೋಗ್ಯವಂತರಾಗಿ ಮರಳಲಿ ಎಂದು ಹಾರೈಸಿದರು. ಸಂಕಷ್ಟದ ಸಮಯದಲ್ಲಿ ಕುಟುಂಬದೊಂದಿಗೆ ನಿಲ್ಲುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಅಗತ್ಯವಿರುವವರಿಗೆ ನೆರವು ನೀಡುವ ಕಾರ್ಯವನ್ನು ಲಕ್ಷ್ಮೀತಾಯಿ ಫೌಂಡೇಶನ್ ನಿರಂತರವಾಗಿ ಮುಂದುವರಿಸಲಿದೆ ಎಂದು ತಿಳಿಸಿದರು.


ಈ ವೇಳೆ ಭಾಗ್ಯಶ್ರೀ ಅವರ ಪಾಲಕರು ಉಪಸ್ಥಿತರಿದ್ದು, ನೆರವಿಗಾಗಿ ಲಕ್ಷ್ಮೀತಾಯಿ ಫೌಂಡೇಶನ್, ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

Related Articles

Back to top button