Kannada NewsKarnataka News

ಪ್ರವಾಹ ಸಂದರ್ಭದಲ್ಲಿ ಅಪಘಾತಕ್ಕೊಳಗಾದ ವ್ಯಕ್ತಿಗೆ ಆರ್ಥಿಕ ನೆರವು

ಪ್ರವಾಹ ಸಂದರ್ಭದಲ್ಲಿ ಅಪಘಾತಕ್ಕೊಳಗಾದ ವ್ಯಕ್ತಿಗೆ ಆರ್ಥಿಕ ನೆರವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

ಇತ್ತೀಚಿನ ಪ್ರವಾಹ ಸಂದರ್ಭದಲ್ಲಿ ಅನೇಕರು ಬೇರೆ ಬೇರೆ ರೀತಿಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆರ್ಥಿಕ ಸಂಕಷ್ಟವಷ್ಟೇ ಅಲ್ಲದೆ ದೈಹಿಕವಾಗಿಯೂ ಹಲವರು ಸಮಸ್ಯೆಗೊಳಗಾಗಿದ್ದಾರೆ. ಕೆಲವರು ಸಾವಿಗೀಡಾದರೆ ಇನ್ನು ಕೆಲವರು ಗಾಯಗೊಂಡು ಚಿಕಿತ್ಸೆ ಪಡೆಯಲು ಪರದಾಡುತ್ತಿದ್ದಾರೆ.
ಅದೇ ರೀತಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದ ವ್ಯಕ್ತಿಯೊಬ್ಬರು ಎರಡೂ ಕೈಗಳಿಗೆ ಪೆಟ್ಟು ಮಾಡಿಕೊಂಡಿದ್ದರು. ಅವರ ಚಿಕಿತ್ಸೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆರ್ಥಿಕ ನೆರವು ನೀಡಿದರು.
 ಪ್ರವಾಹ ಉಂಟಾದ ಹಿನ್ನೆಲೆಯಲ್ಲಿ  ಅಂಬೇವಾಡಿ ಗ್ರಾಮದ  ಗುಂಡು ಪರುಶರಾಮ ಆನಂದಾಚೆ ಇವರ ಮನೆ ಮಳೆಯ ಆರ್ಭಟಕ್ಕೆ ಕುಸಿದು ಬಿದ್ದಿತ್ತು. ಬೀಳುವ ಸಂದರ್ಭದಲ್ಲಿ ತಮ್ಮ ಮನೆಯ ವಸ್ತುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಯತ್ನ ಮಾಡುತ್ತಿದ್ದರು ಗುಂಡು. ಈ ಸಂದರ್ಭದಲ್ಲಿ ಮನೆಯ ಮೇಲ್ಚಾವಣಿಯಿಂದ ಬಿದ್ದು ಅವರ ಎರಡೂ ಕೈಗಳಿಗೆ ಪೆಟ್ಟಾಗಿತ್ತು. ನಂತರ ಆಪರೇಷನ್ ಗೆ ಒಳಗಾಗಬೇಕಾಯಿತು.
 ಇಂದು  ಅವರ ಮನೆಗೆ ತೆರಳಿ ಆರೋಗ್ಯದ ಬಗ್ಗೆ ವಿಚಾರಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಆರ್ಥಿಕ ಸಹಾಯ ಮಾಡಿ ಧೈರ್ಯ ಹೇಳಿದರು.
   ಈ ಸಂದರ್ಭದಲ್ಲಿ ಅಮೂಲ  ಬಾತಖಾಂಡೆ, ಕುಲದೀಪ ತೆರಳೆ, ವಿಕ್ರಮ ಕಾಂಬಳೆ ಮೊದಲಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button