Election NewsKannada NewsKarnataka NewsPolitics

*ದಿಂಗಾಲೇಶ್ವರ ಶ್ರೀ ವಿರುದ್ಧ ಎಫ್‌ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ಭಾಷಣ ಮಾಡುವ ವೇಳೆ ಮಾಡಿಕೊಂಡ ಯಡವಟ್ಟಿನಿಂದಾಗಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮೇ 2ರಂದು ನವಲಗುಂದ ತಾಲೂಕು ಮಾರುಕಟ್ಟೆಯಲ್ಲಿ ಸಮಾವೇಶ ನಡೆದಿತ್ತು. ಈ ವೇಳೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಪ್ರಮುಖ ಭಾಷಣ ಮಾಡಿದ್ದರು. ಮಾತಿನುದ್ದಕ್ಕೂ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.ಈ ವೇಳೆ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡುವ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕಾರಣಕ್ಕಾಗೇ ಸ್ವಾಮೀಜಿ ವಿರುದ್ಧ ಧಾರವಾಡ ಜಿಲ್ಲೆಯ ನವಲಗುಂದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button