LatestNational

*ಭೀಕರ ಅಗ್ನಿ ದುರಂತ: 7 ಜನರ ಸಾವು*

ಪ್ರಗತಿವಾಹಿನಿ ಸುದ್ದಿ: ಭೀಕರ ಅಗ್ನಿ ದುರಂತದಲ್ಲಿ 7 ಜನ ಸಾವಿಗಿಡಾಗಿರುವ ಘಟನೆ ಮಹಾರಷ್ಟ್ರದ ಛತ್ರಪತಿ ಸಂಭಾಜಿ ನಗರದಲ್ಲಿ ನಡೆದಿದೆ.

ಬುಧವಾರ ನಡೆದ ಘಟನೆಯಲ್ಲಿ ಇಬ್ಬರು ಪುರುಷರು, ಮೂವರು ಮಹಿಳೆಯರು, ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಬೆಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಬುಧವಾರ ಬೆಳಗ್ಗೆ ಸುಮಾರು 4 ಗಂಟೆಗೆ ಟೈಲರ್ಸ್‌ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಬೆಂಕಿಯ ಕೆನ್ನಾಲಿಗೆ ಕಟ್ಟಡದ ಮೇಲಿನ ವಸತಿ ಮಹಡಿಗಳನ್ನು ತಲುಪದಿದ್ದರೂ, ತೀವ್ರ ಹೊಗೆ ಇಂದ ಈ ಏಳು ಜನರು ಸಾವನ್ನಪ್ಪಿರಬಹುದು ಎಂದು ಸಂಭಾಜಿ ನಗರದ ಪೊಲೀಸರು ಹೇಳಿದ್ದಾರೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ನಿವಾಸಿಗಳಲ್ಲಿ ಭಯವನ್ನು ಉಂಟುಮಾಡಿದೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಪೊಲೀಸರು ಮಾಹಿತಿ ನೀಡಿರುವ ಪ್ರಕಾರ 7 ಜನರು ಬೆಂಕಿಯ ಹೊಗೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button