Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಒಂದೆ ಕುಟುಂಬದ ಎರಡು ಮನೆಗೆ ಬೆಂಕಿ: ಲಕ್ಷಾಂತರ ರೂಪಾಯಿ ಹಾನಿ*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ಶಾಟ್೯ ಸರ್ಕ್ಯೂಟ್ ನಿಂದಾಗಿ ಬೆಳಗಾವಿಯ ಶಹಾಪುರದಲ್ಲಿರುವ ಹೊಸೂರ ಹರಿಜನ ಗಲ್ಲಿಯಲ್ಲಿ ಒಂದೆ ಕುಟುಂಬದ ಎರಡೂ ಮನೆಗಳಿಗೆ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಹಾನಿ ಆಗಿದೆ ಎನ್ನಲಾಗಿದೆ.‌

ಎರಡು ಮನೆಗಳಿಗೆ ಬೆಂಕಿ ಹತ್ತಿಕೊಂಡ ಪರಿಣಾಮ ಮನೆಯಲ್ಲಿದ್ಸ ಹಣ ಹಾಗೂ ಮನೆಯ ಸಾಮಗ್ರಿ ಸುಟ್ಟು ಕರಕಲಾಗಿದೆ.  ಶಿವರಾಜ ಆಶೋಕ ಮೊದಗೆ, ಶಶಿಕಾಂತ ಮೊದಗೆ ಎಂಬುವರ ಮನೆಯಲ್ಲಿ ವಿದ್ಯುತ್ ಶಾಟ್೯ ಸರ್ಕಿಟ್ ತಗುಲಿದ ಹಿನ್ನೆಲೆಯಲ್ಲಿ ಮನೆಯಲ್ಲಿ ಮದುವೆ ಸಮಾರಂಭಕ್ಕೆಂದು 6 ಲಕ್ಷ ರೂ. ಹಣ, ಚಿನ್ನಾಭರಣ ಸೇರಿದಂತೆ ಮನೆಯ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. 

ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ‌. ಯಾವುದೇ ಪ್ರಾಣಾಪಾಯವಾಗಿಲ್ಲ. ಶಹಾಪುರ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Home add -Advt

Related Articles

Back to top button