Latest

*ಶೆಡ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ತಾಯಿ-ಮಗಳು ಸಜೀವದಹನ*

ಪ್ರಗತಿವಾಹಿನಿ ಸುದ್ದಿ: ಶೆಡ್ ಮೇಲೆ ಪೆಟ್ರೋಲ್ ಸುರಿದು ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, ತಾಯಿ-ಮಗಳು ಸಜೀವದಹನವಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿ ಗ್ರಾಮದಲ್ಲಿ ನಡೆದಿದೆ.

Home add -Advt

ಜೈಬಾನ್ (55), ಶಬಾನ್ (25) ಮೃತ ಮಹಿಳೆಯರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಪೆಟ್ರೋಲ್ ತುಂಬಿಸಿ ದುಷ್ಕರ್ಮಿಗಳು ಶೆಡ್ ಮೇಲೆ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಶೆಡ್ ಸಂಪೂರ್ಣ ಸುಟ್ಟು ಕರಕಲಾಗಿದೆ. ತಾಯಿ-ಮಗಳು ಸಾವನ್ನಪ್ಪಿದ್ದಾರೆ. ದಸ್ತಗಿರಿಸಾಬ್, ಸುಬಾನ್, ಸಿದ್ದಕಿ ಎಂಬ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button