*ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ವಾಯುಬಾರ ಕುಸಿತ ಹಿನ್ನೆಲೆಯಲ್ಲಿ 5 ದಿನಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಉತ್ತರ ಕನ್ನಡ ಜಿಲ್ಲಾಡಳಿತ ಮೀನುಗಾರರಿಗೆ ಎಚ್ಚರಿಕೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಬಾರ ಕುಸಿತವಾಗಿದ್ದು, ಕರಾವಳಿಯಲ್ಲಿ ಮೀನುಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ಕಿ.ಮೀಯಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮೀನುಗಾರರು, ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. *ತಾಯಿ ಮೃತದೇಹದ ಜೊತೆ 4ದಿನ ಕಳೆದಿದ್ದ ಮಗಳೂ ಸಾವು; ಮನಕಲಕುವ ಘಟನೆ ಬೆಳಕಿಗೆ*