Kannada NewsLatest

ನೆರೆ ನಿರ್ವಹಣೆ ‌; ಮತ್ತೆ ಮಹಾರಾಷ್ಟ್ರಕ್ಕೆ‌ ತೆರಳಿದ ಸಚಿವ ರಮೇಶ್ ಜಾರಕಿಹೊಳಿ

 ಪ್ರಗತಿವಾಹಿನಿ ಸುದ್ದಿ, ಮುಂಬೈ – ಅತಿವೃಷ್ಟಿ ನಿರ್ವಹಣೆಯ ಸಮನ್ವಯಕ್ಕಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಮಹಾರಾಷ್ಟ್ರದ ಸಾಂಗ್ಲಿ ಕ್ಷೇತ್ರದ ಲೋಕಸಭಾ ಸದಸ್ಯರಾದ  ಸಂಜಯ್ ಕಾಕಾ‌ ಪಾಟೀಲ್ ಅವರೊಂದಿಗೆ ಚರ್ಚೆ ನಡೆಸಿದರು.
ನೆರೆ ನಿರ್ವಹಣೆಗಾಗಿ ಈಗಾಗಲೇ ಎರಡೂ ರಾಜ್ಯಗಳ ಅಧಿಕಾರಿಗಳ ಸಮನ್ವಯ ಸಮಿತಿ ರಚಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು‌ ಅನುವಾಗುವಂತೆ ಈ‌ ಮಾತುಕತೆ ನಡೆದಿದೆ. ಸಭೆಯಲ್ಲಿ ‌ರಾಜ್ಯದ ಜವಳಿ ಸಚಿವ ಶ್ರೀಮಂತ್ ಪಾಟೀಲ್ ‌ಅವರೂ ಕೂಡಾ ಉಪಸ್ಥಿತರಿದ್ದರು.

Related Articles

Related Articles

Back to top button