
ಪ್ರಗತಿವಾಹಿನಿ ಸುದ್ದಿ, ಶಿರಸಿ – ಉತ್ತರ ಕನ್ನಡ ಜಿಲ್ಲೆಯ ಶಿರಸಿ ತೋಟಗಾರಿಕಾ ಉಪನಿರ್ದೇಶಕರ ಕಚೇರಿಯ ಆವರಣದಲ್ಲಿ ಮೂರು ದಿನಗಳ ಫಲಪುಷ್ಪ ಪ್ರದರ್ಶನ- ಕಿಸಾನ್ ಮೇಳವನ್ನು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಉತ್ತರಕನ್ನಡ ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು.
ತೋಟಗಾರಿಕಾ ಇಲಾಖೆ, ಕೃಷಿ ಇಲಾಖೆ, ಆತ್ಮ ಯೋಜನೆ, ತೋಟಗಾರಿಕಾ ಮಹಾವಿದ್ಯಾಲಯ, ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ ಸಂಬಂಧಿತ ಇಲಾಖೆಗಳು ಹಾಗೂ ಜಿಲ್ಲಾಪಂಚಾಯಿತಿ ಸಹಯೋಗದಲ್ಲಿ ಪ್ರದರ್ಶನ ಸಂಘಟಿಸಲಾಗಿದೆ.

ಪ್ರದರ್ಶನ ಪ್ರೇರಣೆ

ಕಳೆದ ಹಲವು ವರ್ಷಗಳಿಂದ ನಡೆಸುತ್ತಾ ಬಂದಿರುವ ಫಲಪುಷ್ಪ ಪ್ರದರ್ಶನ ವಿವಿಧ ರೀತಿಯ ಪ್ರೇರಣೆಗೆ ಕಾರಣವಾಗಿದ್ದು, ಕೃಷಿಕರು ತಾಂತ್ರಿಕತೆ ಅಳವಡಿಸಿಕೊಳ್ಳುವುದಕ್ಕೆ ಪೂರಕವಾಗಿದೆ.

ಸ್ಥಳೀಯ ಹಲವಾರು ಗಣ್ಯರು, ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ