Kannada NewsKarnataka NewsLatest

*ಭ್ರೂಣ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ನರ್ಸ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆಯ ನರ್ಸ್ ಉಷಾರಾಣಿ ಬಂಧಿತ ಆರೋಪಿ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

Home add -Advt

ಬಂಧಿತ ಉಷಾರಾಣಿ ಪ್ರಮುಖ ಆರೋಪಿ ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಳು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಉಷಾರಾಣಿ ಕೆಲಸ ಬಿಟ್ಟು, ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದ್ದಳು. ಇದೀಗ ಉಷಾರಾಣಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Related Articles

Back to top button