Latest

*ಅರಣ್ಯ ಪ್ರದೇಶದ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಲು ಮಹತ್ವದ ಸಭೆ*

ಪ್ರಗತಿವಾಹಿನಿ‌ ಸುದ್ದಿ: ಖಾನಾಪುರದ ತಾಲೂಕಿನ ಅರಣ್ಯ ಪ್ರದೇಶದಲ್ಲಿ ವಾಸಿಸುವ ನಾಗರಿಕರಿಗೆ ಪುನರ್ವಸತಿ  ಕಲ್ಪಿಸುವ ಸಲುವಾಗಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಲಾಯಿತು.

ಸಭೆಯನ್ನು ವಿಧಾನ ಪರಿಷತ್ ಸದಸ್ಯರಾದ ಎಂ ನಾಗರಾಜು ಅವರ ಮನವಿಯ ಮೇಲೆ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ, ವಿಧಾನ ಪರಿಷತ್ ಸದಸ್ಯ ಎಂ ನಾಗರಾಜು ಯಾದವ್ ಮತ್ತು ಖಾನಾಪುರ ಶಾಸಕರಾದ ಹಲ್ಗಿರ್ಕರ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Home add -Advt

Related Articles

Back to top button