Latest

ಕಾರ್ಯಕರ್ತರ ಪ್ರತಿಭಟನೆ, ಮೊಕದ್ದಮೆ ಮಾಹಿತಿ ಸಂಗ್ರಹಕ್ಕೆ ಡಿ.ಕೆ. ಶಿವಕುಮಾರ್ ಸೂಚನೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಳೆದ ಮೂರು ವರ್ಷಗಳಲ್ಲಿ ಯಾವ ಯಾವ ಹೋರಾಟ, ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಕಲೆ ಹಾಕುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಸಂಶೋಧನೆ (ರಿಸರ್ಚ್) ವಿಭಾಗಕ್ಕೆ ಸೂಚನೆ ನೀಡಿದ್ದಾರೆ.

ಇಲ್ಲಿ ನಾಯಕರೂ ಕಾರ್ಯಕರ್ತರೇ. ಕಾರ್ಯಕರ್ತರೂ ನಾಯಕರೇ. ಪ್ರತಿಯೊಬ್ಬ ಕಾರ್ಯಕರ್ತರು ಯಾವ, ಯಾವ ಹೋರಾಟದಲ್ಲಿ ಪಾಲ್ಗೊಂಡಿದ್ದಾರೆ, ಯಾರ ವಿರುದ್ಧ ಯಾವ, ಯಾವ ಪೊಲೀಸ್ ಮೊಕದ್ದಮೆ ದಾಖಲಾಗಿದೆ ಎಂಬುದರ ವಿವರ ಸಂಗ್ರಹಿಸುವಂತೆ ಕೆಪಿಸಿಸಿ ರಿಸರ್ಚ್ ತಂಡಕ್ಕೆ ಸೂಚನೆ ನೀಡಿರುವುದಾಗಿ ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಡಾನೆ ಹಾವಳಿ ಬಗ್ಗೆ ಸರಕಾರ ಗಂಭೀರವಾಗಿ ಪರಿಗಣಿಸಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Home add -Advt

Related Articles

Back to top button