
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದಿಂದ 1.08 ಕೋಟಿ ರೂ. ಲಾಭಾಂಶದ ಚೆಕ್ಕನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಚೆಕ್ಕನ್ನು ಸ್ವೀಕರಿಸಿದರು. ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು, ವ್ಯವಸ್ಥಾಪಕ ನಿರ್ದೇಶಕ ವೆಂಕಟೇಸನ್ ಮತ್ತಿತರರು ಹಾಜರಿದ್ದರು.